ಒಬ್ಬ ತಂದೆಯ ಮಾತಿಗೆ ಕಾಡಿಗೆ ಹೋರಾಟ
ಇನ್ನೊಬ್ಬ ತನ್ನ ಸ್ವಾರ್ಥಕ್ಕೆ ಮಗನ ಬಲಿ ಕೊಟ್ಟ ।
ಒಬ್ಬ ಹೆಣ್ಣಿನ ಮೋಸಕ್ಕೆ ಬಲಿಯಾಗಿ ತನ್ನ ರಾಜ್ಯವ ಬಿಟ್ಟ
ಇನ್ನೊಬ್ಬ ಹೆಣ್ಣಿನ ಮೋಹಕ್ಕೆ ಬಲಿಯಾಗಿ ತನ್ನ ಪ್ರಣಯನ್ನೇ ಬಿಟ್ಟ ।
ನೊಂದ ಹೆಣ್ಣ ಶಾಪ ವಿಮೋಚಿಸಿ, ಕೊಟ್ಟ ಎಂಜಲ ತಿಂದು ಸವಿದವನೊಬ್ಬನಾದರೆ
ಇಷ್ಟವಿಲ್ಲದಿದ್ದರು ವ್ಯಾಮೋಹಿಸಿ, ತನ್ನವರಿಂದ ದೂರವಿರಿಸಿ ಸ್ವಾರ್ಥದಿಂದ ಮೆರೆದವ ಇನ್ನೊಬ್ಬನಾದನೆ ।।
ಇಬ್ಬರಲ್ಲೂ ಧರ್ಮ ಅಧರ್ಮವ ಹುಡುಕುವ ಓ ಮನುಜ, ನೀ ಮೊದಲು ತಿಳಿಯೇ
ಇಬ್ಬರೂ ಹೆಣ್ಣಿಗೆ ನೋವ ನೀಡಿದವರೇ
ಇಬ್ಬರೂ ಜಗ ಮೆಚ್ಚುವಂತೆ ರಾಜ್ಯವಾಳಿದವರೇ ।
ಇಬ್ಬರು ಭಕ್ತರೇ ಅವರವರ ಇಷ್ಟ ದೈವಕ್ಕೆ
ಇಬ್ಬರು ಧೂಷಿತರೇ ಅವರವರ ಶತೃ ರಾಷ್ಟ್ರಕ್ಕೆ ।
ಇಬ್ಬರಲ್ಲೂ ಧರ್ಮ ಅಧರ್ಮವ ಹುಡುಕುವ ಓ ಮನುಜ, ನೀ ಮೊದಲು ತಿಳಿಯೇ
ಧರ್ಮ ಅಧರ್ಮವದು ಯಾವದೋ ಧೈವ ರಾಕ್ಷಸರಲಿಲ್ಲ, ನಿನ್ನದೇ ಮನದ ಭಾವನೆಗಳವು ಅರಿಯೇ ।।
ಒಂದೇ ಮನುಜನ ಮನದಲ್ಲಿರುವರು ರಾಮ ರಾವಣರಿಬ್ಬರು
ಇನ್ನೋರ್ವರ ಪ್ರಶ್ನಿಸುವ ಮುನ್ನ, ನೀ ಕೇಳಿಕೊ ನಿನ್ನ, ನಿನ್ನ ಮನದೊಳಗಿರುವವರಾರು
ರಾಮನೇ, ರಾವಣನೇ …?
:~ ಒಂಟಿ ಬಾನಾಡಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ